Posts

Showing posts from October, 2025

ಪಠ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಅಳವಡಿಕೆಯಾಗಲಿ

Image
  ಶಾಲಾ ಮಕ್ಕಳ ಬ್ಯಾಗ್ ತೂಕ ಕಡಿಮೆ ಮಾಡಿ; ಡಾ.ತಿಪ್ಪೇಸ್ವಾಮಿ ಕೆ.ಟಿ.  ಶಾಲಾ ಪಠ್ಯಕ್ರಮದಲ್ಲಿ ಮಕ್ಕಳ ಹಕ್ಕುಗಳ ಅಳವಡಿಕೆ ಮಾಡಿಕೊಳ್ಳುವುದರಿಂದ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಮಕ್ಕಳ ಹಕ್ಕುಗಳ ಬಗ್ಗೆ ವ್ಯಾಪಕ ಅರಿವು ಮೂಡಿಸಿದಂತಾಗುತ್ತದೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗೆ ನಿರ್ಣಾಯಕ ಕ್ರಮಕೈಗೊಂಡಂತಾಗುತ್ತದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.  ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದರು. ಮಕ್ಕಳ ಹಕ್ಕುಗಳ ಬಗ್ಗೆ ಈಗಾಗಲೇ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ಸಾಕಷ್ಟು ಅರಿವು ಮೂಡಿಸುತ್ತಿವೆ. ಆದರೆ ಅದು ಪಠ್ಯದ ವಿಷಯವಾದರೆ ಮಕ್ಕಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ತಲುಪುತ್ತದೆ ಎಂದರು.  ಸರ್ಕಾರ ಮಕ್ಕಳ ಶಾಲಾ ಬ್ಯಾಗ್ ತೂಕವನ್ನು ಕಡಿಮೆ ಮಾಡಿ ಸುತ್ತೋಲೆ ಹೊರಡಿಸಿದೆ. ಆದಾಗ್ಯೂ ಮಕ್ಕಳು ಕೆ.ಜಿಗಟ್ಟಲೆ ತೂಕದ ಬ್ಯಾಗ್ ಹೊತ್ತು ಬರುತ್ತಿರುವುದು ಆಯೋಗ ಗಮನಿಸಿದೆ. ಇದು ಮಕ್ಕಳ ದೈಹಿಕ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದ್ದು ಈ ಬಗ್ಗೆ ಇಲಾಖೆ ಸುತ್ತೋಲೆ ನೀಡಿದ್ದರೂ ಸೂಕ್ತ ಮೇಲ್ವಿಚಾರಣೆಯ ಕೊರತೆಯಿಂದ ಮಕ್ಕಳು ಸಮಸ್ಯೆ ಎದುರಿಸಬೇಕಾಗಿದೆ. ಅದರಲ್ಲೂ ಪ್ರತೀ ತಿಂಗಳ ಮೂರನೇ ಶನಿವಾರ ಬ್ಯಾಗ್ ಲೆಸ್ ದಿನವನ್ನು ಆಚರಿಸುವ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ...

ವಿಕಲಚೇತನ ಮಕ್ಕಳ ಸಬಲೀಕರಣಕ್ಕೆ ಆದ್ಯತೆವಹಿಸಿ

Image
ಸಿರಾ : ವಿಕಲಚೇತನ ಮಕ್ಕಳ ಸಬಲೀಕರಣವು ಕೇವಲ ಜವಾಬ್ದಾರಿಯಲ್ಲ, ಅದು ನಮ್ಮ ಸಮಾಜದ ನೈತಿಕ ಕರ್ತವ್ಯ. ಪುನರ್ವಸತಿ ಕಾರ್ಯಕರ್ತರು ಈ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ವಿಕಲಚೇತನ ಮಕ್ಕಳ ಸವಾಲುಗಳು ಮತ್ತು ಅವರ ಅವಕಾಶಗಳ ನಡುವಿನ ಸೇತುವೆಯಾಗಿ, ವಿಕಲಚೇತನ ಮಕ್ಕಳಿಗೆ ದೈಹಿಕ, ಭಾವನಾತ್ಮಕ ಮತ್ತು ಸಾಮಾಜಿಕ ಅಡೆತಡೆಗಳನ್ನು ನಿವಾರಿಸಲು ಸಹಾಯ ಮಾಡುವ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ಮತ್ತು ಭರವಸೆಯನ್ನು ತುಂಬುವ ಪ್ರೇರಕರಾಗಿ ಕೆಲಸಮಾಡಬೇಕಾಗಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ. ಹೇಳಿದರು.   ಅವರು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಮೊಬಿಲಿಟಿ ಇಂಡಿಯಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ತುಮಕೂರು ಇವರ ಸಂಯುಕ್ತಾಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಸಿರಾ ತಾಲ್ಲೂಕಿನ ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ಯರಿಗೆ ಮಕ್ಕಳ ಹಕ್ಕುಗಳ ಬಗ್ಗೆ ಏರ್ಪಡಿಸಿದ್ದ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು.   ವಿಕಲಚೇತನ ಮಕ್ಕಳಿಗೆ ಪರಿಕರಗಳನ್ನು ವಿತರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ ಅವರು ಕುಟುಂಬಗಳಿಗೆ ಮಾರ್ಗದರ್ಶನ ನೀಡುವುದು, ವಿಕಲಚೇತನ ಮಕ್ಕಳನ್ನು ಶೈಕ್ಷಣಿಕ ಮತ್ತು ಸಾಮಾಜಿಕ ಬೆಂಬಲ ವ್ಯವಸ್ಥೆಗಳಿಗೆ ಸಂಪರ್ಕಿಸುವ ಮತ್ತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಮೂಲಕ, ಪುನರ್ವಸತಿ ಕಾರ್ಯಕರ್...

ವಿಕಲಚೇತನ ಮಕ್ಕಳಿಗೆ ಸ್ಥಳೀಯವಾಗಿ ಫಿಜಿಯೋ ಥೆರಪಿ ಸೇವೆ ಲಭ್ಯವಾಗಲಿ

Image
  ಕಳ್ಳಂಬೆಳ್ಳದಲ್ಲಿ  ಫಿಜಿಯೋ   ಥೆರಪಿ ಕೇಂದ್ರದ ಉದ್ಘಾಟನೆ ಪ್ರತಿಯೊಂದು ಮಗುವೂ ಬೆಳೆಯಲು, ಕಲಿಯಲು ಮತ್ತು ಘನತೆಯಿಂದ ಬದುಕಲು ಅವಕಾಶವನ್ನು ಪಡೆಯಬೇಕು. ವಿಕಲಚೇತನ ಮಕ್ಕಳಿಗೆ, ಚಲನೆ ಮತ್ತು ಸ್ವಾತಂತ್ರ‍್ಯವು ಒಂದು ಸವಾಲಾಗಿರಬಹುದು. ಇದನ್ನು ನಿಭಾಯಿಸುವಲ್ಲಿ  ಫಿಜಿಯೋ    ಥೆರಪಿಯು ಪ್ರಮುಖ ಪಾತ್ರ ವಹಿಸುತ್ತದೆ ಹಾಗೂ ಮಕ್ಕಳ ಚಲನಶೀಲತೆ, ಸಮತೋಲನ ಸಾಧಿಸಲು ಸಹಾಯ ಮಾಡುತ್ತದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಪ್ರಾಥಮಿಕ ಆರೋಗ್ಯ ಕೆಂದ್ರದ ಹಂತದಲ್ಲಿ  ಫಿಜಿಯೋ  ಥೆರಪಿ ಸೇವೆ ಒದಗಿಸಲು ಸೂಕ್ತಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಹೇಳಿದರು. ಅವರು ಮೊಬಿಲಿಟಿ ಇಂಡಿಯಾ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಿರಾ ಇವರ ಸಂಯುಕ್ತಾಶ್ರದಲ್ಲಿ ಸಿರಾ ತಾಲ್ಲೂಕು ಕಳ್ಳಂಬೆಳ್ಳದ ಪಿ.ಎಂ.ಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಪಾಠಶಾಲೆಯಲ್ಲಿ ಏರ್ಪಡಿಸಿದ್ದ ವಿಶ್ವ  ಫಿಜಿಯೋ ಥೆರಪಿ ದಿನಾಚರಣೆ ಹಾಗೂ  ಫಿಜಿಯೋ ಥೆರಪಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.   ಮೊಬಿಲಿಟಿ ಇಂಡಿಯಾ ಸಂಸ್ಥೆಯು ಕಳ್ಳಂಬೆಳ್ಳದಲ್ಲಿ ಉಚಿತ  ಫಿಜಿಯೋ ಥೆರಪಿ ಕೇಂದ್ರವನ್ನು ಆರಂಭಿಸಿದ್ದು ಸದರಿ ಚಿಕಿತ್ಸೆಯು ನೋವನ್ನು ಕಡಿಮೆ ಮಾಡುತ್ತದೆ, ಸಂಭವನೀಯ ತೊಡಕುಗಳನ್ನು ತಡೆಯುತ್ತದೆ ಹಾಗೂ ಮಕ್ಕಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನಿಯಮಿತ...

ದೀಪಾವಳಿ ಹಬ್ಬದಲ್ಲಿ ಮಕ್ಕಳ ಬಗ್ಗೆ ಎಚ್ಚರವಿರಲಿ: ಡಾ.ತಿಪ್ಪೇಸ್ವಾಮಿ ಕೆ.ಟಿ.

Image
ಪ್ರತಿಯೊಬ್ಬರ ಬದುಕಿನಲ್ಲಿ ಅಂಧಕಾರವಳಿದು ಬೆಳಕು ತರಲೆಂಬ ಆಶಯದೊಂದಿಗೆ ಆಚರಿಸುವ ದೀಪಾವಳಿ ಹಬ್ಬವು ಪ್ರತೀ ವರ್ಷ ನೂರಾರು ಮಕ್ಕಳ ಜೀವನದಲ್ಲಿ ಕತ್ತಲೆಯನ್ನುಂಟು ಮಾಡುವುದು ದುರ್ದೈವ. ಪಟಾಕಿ ಸಿಡಿಸುವ ಉತ್ಸಾಹದಲ್ಲಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಹಲವಾರು ಪ್ರಕರಣಗಳು ಪ್ರತೀ ವರ್ಷ ದಾಖಲಾಗುತ್ತವೆ. ಹಾಗಾಗಿ ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಮನವಿ ಮಾಡಿದ್ದಾರೆ. 

ವಿದ್ಯಾರ್ಥಿ ಸ್ನೇಹಿ ಸಾರಿಗೆ ನೀತಿ ರೂಪಿಸಲು ಏಕಿಷ್ಟು ಮೀನಾಮೇಷ???

Image
ಶಿಕ್ಷಣ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕು. ಸರ್ಕಾರ ಈ ಹಿನ್ನೆಲೆಯಲ್ಲಿ ‘ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ-2006’ಅನ್ನು ಜಾರಿಗೆ ತಂದಾಗಿದೆ. ಕಾಯಿದೆ ಜಾರಿಯಾದ ಮಾತ್ರಕ್ಕೆ ಹಕ್ಕು ಸಂಬಂದಿಸಿದವರಿಗೆ ತಲುಪಿದಂತಾಗುವುದಿಲ್ಲ. ಕಾಯಿದೆಯ ಅನುಷ್ಟಾನಕ್ಕೆ ಪೂರಕವಾದ ವ್ಯವಸ್ಥೆಗಳು ರಚನೆಯಾಗಬೇಕು ಮತ್ತು ಅವು ಕ್ರಿಯಾಶೀಲವಾಗಿ ಕೆಲಸಮಾಡಬೇಕು. ಇಂತಹ ಹಲವು ವ್ಯವಸ್ಥೆಗಳಲ್ಲಿ ಸಾರಿಗೆ ವ್ಯವಸ್ಥೆ ಕೂಡ ಮಹತ್ವದ್ದು. ಶಿಕ್ಷಣದ ಸಮಾನ ಅವಕಾಶಗಳು ಎಲ್ಲಾ ಮಕ್ಕಳಿಗೂ ಲಭ್ಯವಾಗಬೇಕಾದರೆ ಸಾರಿಗೆ ವ್ಯವಸ್ಥೆ ಅತಿಮುಖ್ಯ. ಅದರಲ್ಲೂ ಬಡತನರೇಖೆಗಿಂತ ಕೆಳಗಿನ ಹಾಗೂ ಮಧ್ಯಮ ವರ್ಗದ ಕುಟುಂಬದ ಮಕ್ಕಳು ಶಿಕ್ಷಣ ಪಡೆಯಲು ಹಾಗೂ ಅವರ ಉನ್ನತ ಶಿಕ್ಷಣದ ಕನಸು ನನಸಾಗಿಸಿಕೊಳ್ಳಲು ಸಾರ್ವಜನಿಕ ಸಾರಿಗೆ ನಿರ್ಣಾಯಕ ಪಾತ್ರವಹಿಸುತ್ತದೆ.   ಕರ್ನಾಟಕದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿದಿನ ಶಾಲಾ-ಕಾಲೇಜುಗಳಿಗೆ ತೆರಳಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ಅವಲಂಬಿಸಿದ್ದಾರೆ. ಶಿಕ್ಷಣದ ಮಹತ್ವವನ್ನು ಮನಗಂಡು ಸರಕಾರವು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಬಸ್ ಪಾಸ್, ಹೆಣ್ಣುಮಕ್ಕಳಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ಸರ್ಕಾರದ ಈ ನಡೆ ಶ್ಲಾಘನೀಯವಾಗಿದ್ದು, ಶಿಕ್ಷಣವನ್ನು ಉತ್ತೇಜಿಸಲು ಸರ್ಕಾರದ ಬದ್ಧತೆಯನ್ನು ಇದು ಪ್ರತಿಬಿಂಬಿಸುತ್ತದೆ ಮತ್ತು ವಿದ್ಯಾರ್ಥಿಗಳು ಆರ್ಥಿಕಹೊರೆಯಿಂದಾಗಿ ಶಿಕ್ಷಣದಿಂದ ವಂಚಿತರಾಗದ...

ಮಕ್ಕಳ ಹಕ್ಕುಗಳ ಸಾಕಾರಕ್ಕೆ ಬೇಕಿದೆ; ಗ್ರಾಮಾಡಳಿತದ ಸ್ಪಂದನೆ.

Image
ಕರ್ನಾಟಕ ಸರ್ಕಾರವು ಗ್ರಾಮ ಪಂಚಾಯತ್‌ಗಳನ್ನು ಮಕ್ಕಳ ಸ್ನೇಹಿಯನ್ನಾಗಿ ರೂಪಿಸಲು ಹಾಗೂ ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಹಲವಾರು ದೂರದೃಷ್ಟಿಯ ಕಾರ್ಯಕ್ರಮಗಳನ್ನು ಪರಿಚಯಿಸಿದೆ. ಆ ಮೂಲಕ ಗ್ರಾಮೀಣ ಪ್ರದೇಶದ   ಮಕ್ಕಳ ಹಕ್ಕುಗಳು ಮತ್ತು ಅವರ ವಿಕಾಸವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೂಲಕ ರೂಪಿಸಲಾದ ಇಂತಹ ಮುಖ್ಯ ಉಪಕ್ರಮಗಳಲ್ಲಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿಯ ಸ್ಥಾಪನೆ , ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳ ಆಯೋಜನೆ , ಪಂಚಾಯ್ತಿ ಮಟ್ಟದ ಮಕ್ಕಳ ಅಂಕಿಅ A ಶಗಳ ಸಂಗ್ರಹ , ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವ ಪ್ರಯತ್ನಗಳು , ಗ್ರಾಮೀಣ ಗ್ರಂಥಾಲಯಗಳ ಸಬಲೀಕರಣ ಮತ್ತು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಸೇರಿವೆ. ಇಂತಹ ಮಹತ್ವದ ಸದುದ್ದೇಶವುಳ್ಳ ಕಾರ್ಯಕ್ರಮಗಳು ತಳಮಟ್ಟದಲ್ಲಿ ಪರಿಣಾಮಕಾರಿಯಾಗಿ ಮತ್ತು ಯಶಸ್ವಿಯಾಗಿ ಕಾರ್ಯಗತಗೊಳಿಸಿದರೆ , ಕರ್ನಾಟಕವು ಇಡೀ ದೇಶಕ್ಕೆ ಮಾದರಿಯಾಗಿ ನಿಲ್ಲಬಹುದಾಗಿದೆ. ಈ ಹಿನ್ನೆಲೆಯಲ್ಲಿ ಪಂಚಾಯ್ತಿ ಮಟ್ಟದ ಮಕ್ಕಳ ಹಕ್ಕುಗಳ ರಕ್ಷಣಾ ವ್ಯವಸ್ಥೆಗಳ ಸಂಕ್ಷಿಪ್ತ ಪರಿಚಯ ಈ ಲೇಖನದಲ್ಲಿದೆ. ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಮತ್ತು ವಿಕಾಸಕ್ಕೆ ಸಂಬ A ಧಿಸಿದ ಸಮಸ್ಯೆಗಳನ್ನು ಪರಿಹರಿ...